ಆ.27: ಹಿಂದೂ ಮಹಾಸಭಾ ಗಣಪತಿಯ ಪ್ರತಿಷ್ಠಾಪನೆ ಪ್ರತಿನಿತ್ಯ ಸಾಂಸ್ಕೃತಿಕ ಸಂಜೆ : ಸೆ. 6ರಂದು ರಾಜಬೀದಿ
ಶಿವಮೊಗ್ಗ: ಶಿವಮೊಗ್ಗದ ಹಿಂದೂ ಸಂಘಟನಾ ಮಹಾ ಮಂಡಳಿಯಿಂದ ಈ ಬಾರಿ 81ನೇ ವರ್ಷದ ಗಣೇಶೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಶಿವಮೊಗ್ಗದ ಅತಿ ದೊಡ್ಡ ಗಣಪತಿ ಉತ್ಸವ ಇದಾಗಿದ್ದು, ಈ ಬಾರಿ 11 ದಿನಗಳ ಕಾಲ ಗಣಪತಿಯನ್ನು ಪ್ರತಿಷ್ಠಾಪಿಸ ಲಾಗುತ್ತಿದೆ. ಇದೀಗ ಸಮಿತಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ 11 ದಿನಗಳ ಕಾಲ ನಡೆಯುವ ಕಾರ್ಯಕ್ರಮದ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ
ಗಣಪತಿಯ ಪ್ರತಿಷ್ಠಾಪನೆ.
ಆಗಸ್ಟ್ 27ರ ಬುಧವಾರ ಬೆಳಿಗ್ಗೆ 11:30ಕ್ಕೆ ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದಲ್ಲಿ ನೆರವೇರಲಿದೆ. ಗಣೇಶೋತ್ಸವದ ಪ್ರಯುಕ್ತ ಪ್ರತಿದಿನ ಸಂಜೆ 7 ಗಂಟೆಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಗಳನ್ನು ಆಯೋಜಿಸಲಾಗಿದೆ.

