ಈದ್ಗಾ ಮೈದಾನಕ್ಕೆ ಬೇಲಿ: ಹಿಂದು ಸಂಘಟನೆಗಳ ಪ್ರತಿಭಟನೆ
ಶಿವಮೊಗ್: ಡಿಸಿ ಕಚೇರಿಯ ಎದುರಿನ ಈದ್ಗಾ ಮೈದಾನದಲ್ಲಿ ವಾಹನಗಳು ಮತ್ತು ಸಾರ್ವಜನಿಕರು ಓಡಾಡದಂತೆ ಬೇಲಿ ಹಾಕಿರುವುದು ಹಿಂದೂ ಸಂಘಟನೆ ಮತ್ತು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
ಈ ಈದ್ಗಾ ಮೈದಾನಕ್ಕೆ ಬೇಲಿ ಹಾಕಿರುವುದು ಹಿಂದೂ ಸಂಘಟನೆಯ ಆಕ್ರೋಶಕ್ಕೆ ಗುರಿಯಾಗಿದೆ. ಇದು ಸಾರ್ವಜನಿಕರ ಆಸ್ತಿವಿನಃ ಬೇರೆಯಾರದ್ದೂ ಆಸ್ತಿಯಲ್ಲ. ಈ ಬೇಲಿಯನ್ನ ಪೊಲೀಸರೆ ತೆಗೆಸಬೇಕು. ಇಲ್ಲವಾದಲ್ಲಿ ನಾವೇ ಬೇಲಿ ತೆಗೆಯುವುದಾಗಿ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದರು.
ಜಯನಗರ ಪೊಲೀಸರು ಸಮಯಾವಕಾಶ ಕೊಡಿ ಬೇಲಿ ತೆಗೆಸುವುದಾಗಿ ತಿಳಿಸಿದರು. ಇಷ್ಟಕ್ಕೂ ಸುಮ್ಮನಾಗದ ಹಿಂದೂ ಸಂಘಟನೆಗಳು ಮತ್ತು ಸಾರ್ವಜನಿಕರು ಈ ಬೇಲಿ ಹಾಕುವವರೆಗೆ ಪೊಲೀಸರು ಸುಮ್ಮನೆ ಕುಳಿತಿದ್ದೀರ ಎಂದು ಆರೋಪಿಸಿದರು.


